ಬೆಂಗಳೂರು: ರಾಜ್ಯ ಹೈಕೋರ್ಟ್ ಸಿಬಿಐ ಮತ್ತು ಮಾಜಿ ಸಚಿವ ಗಣಿಧನಿ ಜಿ ಜನಾರ್ದನ ರೆಡ್ಡಿ ಅವರ ಪತ್ನಿ ಜಿ ಲಕ್ಷ್ಮಿ ಅರುಣ ಅವರಿಗೆ ನೊಟೀಸ್ ಜಾರಿ ಮಾಡಿದೆ.
ಅಕ್ರಮ ಗಣಿಗಾರಿಕೆ ಮತ್ತು ಕಲ್ಲಿದ್ದಲು ಗಣಿಯನ್ನು ಅಕ್ರಮವಾಗಿ ರಫ್ತು ಮಾಡಿರುವ ಕೇಸಿಗೆ ಸಂಬಂಧಪಟ್ಟಂತೆ ಸಿಬಿಐ ವಿಶೇಷ ನ್ಯಾಯಾಲಯ ಲಕ್ಷ್ಮಿ ಅರುಣ ಅವರನ್ನು ಕೇಸಿನಿಂದ ಖುಲಾಸೆಗೊಳಿಸಿದ್ದನ್ನು ಪ್ರಶ್ನಿಸಿ ಸಮಾಜ ಪರಿವರ್ತನ ಸಮುದಾಯ ಕ್ರಿಮಿನಲ್ ಮೊಕದ್ದಮೆ ದಾಖಲಿಸಿತ್ತು.