ಬೆಂಗಳೂರಿಗೆ ತಂಪೆರೆದ ಮಳೆ: ಧಾರಾಕಾರ ಮಳೆಗೆ ಬೈಕ್ ಸವಾರ ಬಲಿ

ಬಿಸಿಲಿನ ಜಳಕ್ಕೆ ಬೆಂಗಳೂರಿಗರು ಸುಸ್ತಾಗಿದ್ದರು. ಇಂದು ಸಂಜೆ ಸುರಿದ ಧಾರಾಕಾರ ಮಳೆ ಸಿಲಿಕಾನ್ ಸಿಟಿಗೆ ತಂಪೆರೆದಿದ್ದು ಆದರೆ ಮಳೆಗೆ ಬೈಕ್ ಸವಾರನೊಬ್ಬ ಬಲಿಯಾಗಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಬಿಸಿಲಿನ ಜಳಕ್ಕೆ ಬೆಂಗಳೂರಿಗರು ಸುಸ್ತಾಗಿದ್ದರು. ಇಂದು ಸಂಜೆ ಸುರಿದ ಧಾರಾಕಾರ ಮಳೆ ಸಿಲಿಕಾನ್ ಸಿಟಿಗೆ ತಂಪೆರೆದಿದ್ದು ಆದರೆ ಮಳೆಗೆ ಬೈಕ್ ಸವಾರನೊಬ್ಬ ಬಲಿಯಾಗಿದ್ದಾರೆ.
ನಗರದ ಲುಂಬಿಣಿ ಗಾರ್ಡನ್ ಬಳಿ ಬೈಕ್ ಸವಾರ ಸಿಗ್ನನ್ ನಲ್ಲಿ ನಿಂತಿದ್ದಾಗ ರಸ್ತೆ ಬದಿಯ ಮರದ ಕೊಂಬೆಯೊಂದು ಆತನ ತಲೆಯ ಮೇಲೆ ಬಿದ್ದಿದ್ದರಿಂದ ಆತ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. 
ಮೃತನನ್ನು ಕುಣಿಗಲ್ ಮೂಲದ 27 ವರ್ಷದ ಕಿರಣ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಕಿರಣ್ ಕೋರಿಯರ್ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಕೆಆರ್ ಪುರದಿಂದ ಹೆಬ್ಬಾಳ ಮಾರ್ಗವಾಗಿ ಮನೆಗೆ ತೆರಳುವಾಗ ಮರ ಬಿದ್ದ ಪರಿಣಾಮ ಸ್ಥಳದಲ್ಲೇ ಆತ ಕೊನೆಯುಸಿರೆಳೆದಿದ್ದಾರೆ.
ಇಂದು ಸಂಜೆ ನಗರದ ಜೆಪಿ ನಗರ, ಮೆಜೆಸ್ಟಿಕ್, ಬಿಟಿಎಂ ಲೇಔಟ್, ಚಾಲುಕ್ಯ ಸರ್ಕಲ್, ಎಚ್ಎಸ್ಆರ್ ಲೇಔಟ್, ಮಾರುಕಟ್ಟೆ, ಜಯನಗರ, ಬನಶಂಕರಿ, ಶಿವಾಜಿನಗರ ಸುತ್ತಮುತ್ತ ಭಾರಿ ಮಳೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com