ನ್ಯಾ. ಆರ್ ಎನ್ ಸಚಿನ್ ಕೌಶಿಕ್ ತೀರ್ಪು ಪ್ರಕಟಿಸಿದ್ದು, ಉದ್ದೇಶಪೂರ್ವಕವಾಗಿ ಯುಟಿಐ ಮ್ಯುಚುಯಲ್ ಫಂಡ್ಸ್ ನಲ್ಲಿ1.33 ಕೋಟಿ ರೂಪಾಯಿ ಪಿಂಚಣಿ ನಿಧಿಯನ್ನು ಹೂಡಿಕೆ ಮಾಡುವ ಮೂಲಕ ಕರ್ನಾಟಕ ಪಶುವೈದ್ಯ, ಪ್ರಾಣಿ ಮತ್ತು ಮೀನುಗಾರಿಕೆ ವಿಶ್ವವಿದ್ಯಾನಿಲಯ ಕಾಯಿದೆ, 2004 ನ್ನು ಉಲ್ಲಂಘನೆ ಮಾಡಿರುವ ಅಧಿಕಾರಿಯನ್ನು ಅಪರಾಧಿ ಎಂದು ಘೋಷಿಸಿದ್ದಾರೆ. ಕಾಯ್ದೆ ಉಲ್ಲಂಘನೆಯಾಗಿದ್ದರಿಂದ ಸರ್ಕಾರದ ಬೊಕ್ಕಸಕ್ಕೆ 84.31 ಲಕ್ಷ ರೂಪಾಯಿ ನಷ್ಟವಾಗಿತ್ತು.