ಬೆಂಗಳೂರು: ಭಾನುವಾರ ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಪೋಟದಲ್ಲಿ ಸಾವನ್ನಪ್ಪಿದ ರಾಜ್ಯದ ಐವರ ಮೃತದೇಹ ಮಂಗಳವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಿದೆ. ಸ್ಪೋಟದಲ್ಲಿ ಒಟ್ಟು 8 ಕನ್ನಡಿಗರು ಸಾವನ್ನಪ್ಪಿದ್ದು ಇದರಲ್ಲಿ ಐವರ ಶವಗಳು ಬೆಂಗಳೂರಿಗೆ ಆಗಮಿಸಿದ್ದು ಕುಟುಂಬಿಗರು, ಆಪ್ತರ ಆಕ್ರಂದನ ಮುಗಿಲು ಮುಟ್ಟಿದೆ.
ಶೆಟ್ಟಿಪಾ:ಳ್ಯದ ರಾಮಕೃಷ್ಣಪ್ಪ ನಾಗರಾಜ್, ಕಾಚನಹಳ್ಳಿಯ ಹನುಮಂತರಾಯಪ್ಪ, ಎಂ. ಲಕ್ಷ್ಮಿನಾರಾಯಣ, ಮುನಿಯಪ್ಪ ರಂಗಪ್ಪ ಮತ್ತು ಹನುಮಯ್ಯ ಶಿವಕುಮಾರ್ ಅವರ ದೇಹಗಳು ಮಂಗಳವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಿದೆ.
ಯುಎಲ್-173 ಶ್ರೀಲಂಕಾ ಏರ್ ಲೈನ್ಸ್ ವಿಮಾನದಲ್ಲಿ ಈ ಮೃತದೇಹವನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತರಲಾಗಿತ್ತು. ಆ ವೇಳೆ ನೆಲಮಂಗಲ ಶಾಸಕ ಶ್ರೀನಿವಾಸ್, ಇ.ಕೃಷ್ಣಪ್ಪ ಆಗಮಿಸಿದ್ದು ಮೃತರ ಅಂತಿಮ ದರ್ಶನ ಪಡೆದಿದ್ದಾರೆ.
ಇಂದು ಸಂಜೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶ್ರೀಲಂಕಾದಲ್ಲಿ ನಡೆದ ಉಗ್ರರ ದಾಳಿಗೆ ಬಲಿಯಾದ ಶೆಟ್ಟಿಪಾಳ್ಯ ರಾಮಕೃಷ್ಣಪ್ಪ ನಾಗರಾಜ್ ಎಂಬುವರ ಮೃತದೇಹವನ್ನು ಸ್ವೀಕರಿಸಲಾಗಿದ್ದು ಔಪಚಾರಿಕತೆಗಳು ಮುಗಿದ ತಕ್ಷಣವೇ ಮೃತದೇಹವನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. pic.twitter.com/3GdJt15c9v