ಅಡ್ವೊಕೇಟ್ ಎನ್ ಪಿ ಅಮೃತೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಲಿಸಿದ ಹೈಕೋರ್ಟ್ 2015ರ ಏಪ್ರಿಲ್ 13ರಂದು ಹೊರಡಿಸಿದ್ದ ಸುತ್ತೋಲೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತು. ಅಂದು ಹೊರಡಿಸಿದ್ದ ಸುತ್ತೋಲೆಯಲ್ಲಿ ಖಾಸಗಿ ಮತ್ತು ಅನುದಾನಿತ ಶಾಲೆಗಳು ಶುಲ್ಕ, ಸಿಬ್ಬಂದಿ, ಮೂಲಭೂತ ಸೌಕರ್ಯ ಮೊದಲಾದ ವಿವರಗಳನ್ನು ಕಡ್ಡಾಯವಾಗಿ ಶಾಲೆಯ ಮುಂದೆ ಪ್ರದರ್ಶಿಸುವಂತೆ ಸೂಚಿಸಿತ್ತು. ಆದರೆ ಸರ್ಕಾರ ಅದನ್ನು ಇನ್ನೂ ಜಾರಿಗೆ ತಂದಿಲ್ಲ.