ಬಳ್ಳಾರಿ: ಟ್ರ್ಯಾಕ್ಟರ್‌ಗೆ ಬಸ್‌ ಡಿಕ್ಕಿ; ಇಬ್ಬರು ಸಾವು, 28 ಮಂದಿಗೆ ಗಾಯ

ಟ್ರಾಕ್ಟರ್‌ಗೆ ಬಸ್‌ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 28 ಜನ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬಳ್ಳಾರಿ: ಟ್ರಾಕ್ಟರ್‌ಗೆ ಬಸ್‌ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 28 ಜನ ಗಾಯಗೊಂಡಿರುವ ಘಟನೆ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಾರುವನಹಳ್ಳಿ ಕೋಳಿ ಫಾರಂ ಬಳಿ ಇಂದು ಬೆಳಗ್ಗೆ ಸಂಭವಿಸಿದೆ.
ಹೊಸಪೇಟೆ ತಾಲೂಕಿನ ಚಿಲಕನಹಟ್ಟಿಯ ಯರಿಸ್ವಾಮಿ (30) ಹಾಗೂ ರೇಣುಕಮ್ಮ (30) ಮೃತರೆಂದು ಗುರುತಿಸಲಾಗಿದೆ.ಇಂದು ಬೆಳಗ್ಗೆ ಹಾರುವನಹಳ್ಳಿ ಹಾಗೂ ಚಿಲಕನಹಟ್ಟಿಯಿಂದ ನರೇಗಾ ಕೆಲಸಕ್ಕೆಂದು ಜನರು ಎಂದಿನಂತೆ ಟ್ರ್ಯಾಕ್ಟರ್‌ನಲ್ಲಿ ತೆರಳುತ್ತಿದ್ದರು.
ಈ ವೇಳೆ ರಾಷ್ಟ್ರೀಯ ಹೆದ್ದಾರಿ 53ರ ಹೊಸಪೇಟೆ ತಾಲೂಕಿನ ಹಾರುವನಹಳ್ಳಿ ಕೋಳಿ ಫಾರಂ ಬಳಿ ಬೆಂಗಳೂರಿನಿಂದ ಗಂಗಾವತಿಗೆ ಹೊರಟಿದ್ದ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ರಾಜಹಂಸ ಬಸ್‌, ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, 28 ಮಂದಿ ಗಾಯಾಳುಗಳನ್ನು ಹೊಸಪೇಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com