ಬೆಂಗಳೂರು: ಏಪ್ರಿಲ್ 30 ಮತ್ತು ಮೇ 2 ರ ನಂತರ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಲಿದ್ದು,ತಮಿಳುನಾಡು, ಕೇರಳ , ಪುದುಚೇರಿ ಹಾಗೂ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಈ ಭಾಗಗಳಿಗೆ ಪ್ರವಾಸಕ್ಕೆ ತೆರಳಲು ಯೋಚಿಸಿದ್ದವರು ಮುಂಜಾಗ್ರತೆ ವಹಿಸಬೇಕಾಗಿದೆ.
ಪುದುಚೇರಿ, ಕೇರಳ, ತಮಿಳುನಾಡು, ಸಕಲೇಶಪುರ, ಚಿಕ್ಕಮಗಳೂರು, ಮಂಗಳೂರು ಮತ್ತಿತರ ಕಡಲ ತೀರ ಪ್ರದೇಶಗಳಿಗೆ ಬೇಸಿಗೆ ಪ್ರವಾಸಕ್ಕೆ ಹೋಗುವಂತವರು ಮುಂಜಾಗ್ರತೆ ವಹಿಸಬೇಕಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Advertisement