ವಿಜಯಪುರ: ಲಾರಿ-ಬೈಕ್ ಡಿಕ್ಕಿ, ಒಂದೇ ಕುಟುಂಬದ ಮೂವರು ದುರ್ಮರಣ

ಇಲ್ಲಿನ ತಿಡಗುಂದಿ ಬಸ್ ನಿಲ್ದಾಣದ ಬಳಿ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ವಿಜಯಪುರ: ಇಲ್ಲಿನ ತಿಡಗುಂದಿ ಬಸ್ ನಿಲ್ದಾಣದ ಬಳಿ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ.
ವಿಜಯಪುರ ತಾಲೂಕಿನ ತಿಡಗುಂದಿ ಬಸ್ ನಿಲ್ದಾಣದ ಬಳಿ ಈ ದುರ್ಘಟನೆ ಸಂಭವಿಸಿದೆ. 47 ವರ್ಷದ ಬಾಳು ಪಾಂಡ್ರೆ ಹಾಗೂ ಅವರ ಜತೆ ಕುಳಿತಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಾಲಕ ಲಾರಿ ಸಮೇತ ಪರಾರಿಯಾಗಿದ್ದು, ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com