ಗೋಕರ್ಣ: ಖ್ಯಾತ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ದಂಪತಿ ಭಾನುವಾರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಶಿವನ ಆತ್ಮಲಿಂಗಕ್ಕೆ ವಿಶೇಷ ಪೂಜೆ ಅಭಿಷೇಕ ನೆರವೇರಿಸಿದರು.
ಮಹಾಬಲೇಶ್ವರನ ಆತ್ಮಲಿಂಗಕ್ಕೆ ಪಂಚಾಮೃತ, ನವಧಾನ್ಯ, ಗಂಗಾಭಿಷೇಕ ಪೂಜೆ ಮತ್ಸುವರ್ಣ ನಾಗಾಭರಣ ವಿಶೇಷ ಪೂಜೆ ನೆರವೇರಿಸಿದರು. ದಂಪತಿಗೆ ದೇವಾಲಯದ ಅರ್ಚಕರು ಸ್ಮರಣಿಕೆ ನೀಡಿ ಗೌರವಿಸಿದರು.