ಕಳೆದ ಶನಿವಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮಂಡಳಿ ಜೊತೆ ಸಭೆ ನಡೆಸಿದ್ದ ಕುಮಾರಸ್ವಾಮಿ ರಥ ನಿರ್ಮಾಣ ಸಂಬಂಧ ಸಮಾಲೋಚನೆ ನಡೆಸಿದ್ದರು. ಸ್ವರ್ಣ ರಥ ನಿರ್ಮಾಣಕ್ಕೆ 240 ಕೆ.ಜಿ.ಚಿನ್ನದ ಅಗತ್ಯತೆಯಿದ್ದು, ಇದಕ್ಕೆ ಸುಮಾರು 85 ಕೋಟಿ ರೂ. ವೆಚ್ಚವನ್ನು ಅಂದಾಜಿಸಲಾಗಿದೆ. ಕುಕ್ಕೆ ದೇವಳದಲ್ಲಿ 320 ಕೋಟಿ ರೂ. ಸ್ವಂತ ನಿಧಿ ಇದ್ದು, ನಿಧಿಯಲ್ಲಿನ ಸ್ವಲ್ಪ ಭಾಗವನ್ನು ರಥ ನಿರ್ಮಾಣಕ್ಕೆ ಬಳಸಲು ಕುಮಾರಸ್ವಾಮಿ ಚಿಂತನೆ ನಡೆಸಿದ್ದು, ಈ ಸಂಬಂಧ ಮುಜರಾಯಿ ಇಲಾಖೆಯಿಂದ ಸಚಿವ ಸಂಪುಟಕ್ಕೆ ಅನುಮೋದನೆ ಕಳುಹಿಸಲು ಸೂಚಿಸಿದ್ದಾರೆ.