ಬೆಂಗಳೂರು: ಈ ವರ್ಷ ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳ ಫಲಿತಾಂಶ ನಿರೀಕ್ಷೆಗಿಂತ ಮೊದಲೇ ತ್ವರಿತವಾಗಿ ಯಾವುದೇ ವಿವಾದ, ಗೊಂದಲಗಳಿಲ್ಲದೆ ಪ್ರಕಟವಾಗಿರುವುದಕ್ಕೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ವರ್ಗಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ತಂತ್ರಜ್ಞಾನದ ನೆರವು ಹಾಗೂ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ದೊರೆತಾಗ ಪರಿಣಾಮಕಾರಿ ಕಾರ್ಯನಿರ್ವಹಣೆ ಸಾಧ್ಯ ಎನ್ನುವುದಕ್ಕೆ ಈ ವರ್ಷದ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಪರೀಕ್ಷಾ ಪ್ರಕ್ರಿಯೆ ನಿರ್ವಹಣೆ ಉತ್ತಮ ನಿದರ್ಶನ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಪರೀಕ್ಷೆಗಳ ಫಲಿತಾಂಶ ತ್ವರಿತವಾಗಿ ಪ್ರಕಟವಾಗುವ ಮೂಲಕ ಪೋಷಕರು ಹಾಗೂ ವಿದ್ಯಾರ್ಥಿಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ಇಡೀ ಪರೀಕ್ಷಾ ಪ್ರಕ್ರಿಯೆಯನ್ನು ಯಾವುದೇ ಗೊಂದಲಕ್ಕೆ ಆಸ್ಪದ ನೀಡದೆ ಯಶಸ್ವಿಯಾಗಿ ನಿರ್ವಹಿಸಿದ ಎಲ್ಲ ಅಧಿಕಾರಿ, ಸಿಬ್ಬಂದಿಗೆ ಹೃತ್ಪೂರ್ವಕ ಅಭಿನಂದನೆಗಳು. #SSLC
ತಂತ್ರಜ್ಞಾನದ ನೆರವು ಹಾಗೂ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ದೊರೆತಾಗ ಪರಿಣಾಮಕಾರಿ ಕಾರ್ಯನಿರ್ವಹಣೆ ಸಾಧ್ಯ ಎನ್ನುವುದಕ್ಕೆ ಈ ವರ್ಷದ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಪರೀಕ್ಷಾ ಪ್ರಕ್ರಿಯೆ ನಿರ್ವಹಣೆ ಉತ್ತಮ ನಿದರ್ಶನ.#SSLC#sslcresults
ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ಕಳೆದ ವರ್ಷಕ್ಕಿಂತ ತುಸು ಹೆಚ್ಚಾಗಿರುವುದು ಸಂತೋಷದ ವಿಷಯ. ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು, ಶಾಲೆಗಳಿಗೆ ಅಭಿನಂದನೆಗಳು. ಅನುತ್ತೀರ್ಣರಾದ ವಿದ್ಯಾರ್ಥಿಗಳು ನಿರಾಸೆ ಹೊಂದುವ ಅಗತ್ಯವಿಲ್ಲ. ಮುಂದಿನ ಬಾರಿ ಹೆಚ್ಚಿನ ಪರಿಶ್ರಮ ವಹಿಸಿ ಪರೀಕ್ಷೆ ಎದುರಿಸಿ, ಯಶಸ್ವಿಯಾಗಿ.#SSLC