ಮುಂಬೈ ಮೂಲದ ಫೈನಾನ್ಸ್ ಸಂಸ್ಥೆಯಿಂದ ಸಿದ್ಧಾರ್ಥ್ ಸಾವಿರಾರು ಕೋಟಿ ರೂ ಸಾಲ ಪಡೆದು, ಆದೇ ಫೈನಾನ್ಸ್ ಸಂಸ್ಥೆಯಿಂದ ಸಿದ್ಧಾರ್ಥ್ ಕಿರುಕುಳ ಅನುಭವಿಸಿದ್ದರು. ಕಿರುಕುಳ ತಾಳಲಾರದೇ ಸಿದ್ಧಾರ್ಥ್ ಆತ್ಮಹತ್ಯೆಗೆ ಮುಂದಾಗಿದ್ದರು. ಈ ಸಂಬಂಧ ಜುಲೈ 27ರಂದು ಡೆತ್ ನೋಟ್ ಬರೆದಿಟ್ಟಿದ್ದ ಸಿದ್ಧಾರ್ಥ್, ಆ ಪತ್ರದಲ್ಲಿ ಆರ್ಥಿಕ ಒತ್ತಡ ಮತ್ತು ತೆರಿಗೆ ಇಲಾಖೆಯ ಅಧಿಕಾರಿಗಳ ಕಿರುಕುಳದ ಕುರಿತು ಉಲ್ಲೇಖ ಮಾಡಿದ್ದರು. ಅಲ್ಲದೆ ತಮ್ಮ ಸಿಬ್ಬಂದಿಗಳಿಗೆ ನನ್ನಿಂದ ತೊಂದರೆಯಾಗಬಾರದು ಎಂದು ಆಶಿಸಿದ್ದರು.