ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಶಂಕಿತ ಭಯೋತ್ಪಾದಕರು ಆಶ್ರಯ ಪಡೆದಿರುವ ಬಗ್ಗೆ ಇದೇ ವೇಳೆ ಪ್ರಸ್ತಾಪಿಸಿರುವ ಅವರು, ಭಯೋತ್ಪಾದಕರ ಬಗ್ಗೆ ಎಚ್ಚರವಹಿಸಿ. ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಬೇಕು. ರಾಜ್ಯದಲ್ಲಿ ಕೋಮುಗಲಭೆ ಸಂಭವಿಸದಂತೆ ಎಚ್ಚರ ವಹಿಸಬೇಕು. ಕೋಮುಗಲಭೆಗಳಿಗೆ ಪ್ರಚೋದನೆ ನೀಡುವವರು ಯಾರೇ ಇರಲಿ ಅಂಥಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದ್ದಾರೆ.