ಸಿಡಬ್ಲ್ಯೂಆರ್'ಸಿಯಲ್ಲಿ ಕರ್ನಾಟಕ, ತಮಿಳುನಾಡು, ಕೇರಳ, ಪುದುಚೇರಿಯ ಜಲಸಂಪನ್ಮೂಲ ಇಲಾಖೆ ಅಧಿಕಾರಿ ಪ್ರತಿನಿಧಿಗಳು ಸೇರಿ ಒಟ್ಟು 9 ಮಂದಿ ಸದಸ್ಯರಿದ್ದಾರೆ. ಈ ಸಮಿತಿಯ ಸದಸ್ಯರು ನಿನ್ನೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಕಾವೇರಿ ವ್ಯಾಪ್ತಿಯ ನಾಲ್ಕೂ ಜಲಾಶಯಗಳ ನೀರಿನ ಮಟ್ಟ ಪರಿಶೀಲಿಸಿ ಈ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.