ಶನಿವಾರ ರಾಜೀವ್ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ವಿಶ್ವ ಹೋಮಿಯೋಪತಿ ದಿನಾಚರಣೆ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಧುನಿಕ ಕಾಲದಲ್ಲಿ ಮನಸ್ಸು-ದೇಹಕ್ಕೆ ವಿಶ್ರಾಂತಿ ಇಲ್ಲದೆ ದುಡಿಯುವ ಮನಃಸ್ಥಿತಿ ಆರಂಭವಾಗಿದೆ. ಧಾರ್ಮಿಕ ಆಚರಣೆಗಳು ಕಡೆಗಣಿಸಲ್ಪಡುತ್ತಿದೆ. ಅರ್ಥ ಧರ್ಮವನ್ನು ಮೀರಬಾರದು, ಅರ್ಥಕ್ಕೆ ಮಿತಿ ಇರಬೇಕು ಎಂದ ಅವರು, ಆಧುನಿಕ ಜೀವನ ಶೈಲಿಯಲ್ಲಿ ಧರ್ಮದ ಸ್ಥಾನವನ್ನು ಅರ್ಥ ಆಕ್ರಮಿಸಿದೆ ಎಂದು ವಿಶ್ಲೇಷಿಸಿದರು.