ನೆರೆಯ ಕೊಯ್ನಾ, ವರುಣಾ ಸೇರಿದಂತೆ ಕೆಲವು ಜಲಾಶಯಗಳು ಬಹುತೇಕ ತುಂಬಿದ್ದು, ಇದರಿಂದ ಕೃಷ್ಣಾ ಕೊಳ್ಳದಲ್ಲಿ ನೀರಿನ ಹರಿವು ಹೆಚ್ಚಾಗಿದೆ. 519.60 ಮೀ.ಎತ್ತರದ ಆಲಮಟ್ಟಿ ಜಲಾಶಯ ಮೈದುಂಬಲು ಕೇವಲ 25 ಸೆಂಟಿ ಮೀಟರ್ ಮಾತ್ರ ಬಾಕಿ ಇದೆ. ಈಗಾಗಲೇ ಸುಮಾರು ಎರಡು ಲಕ್ಷ ಕ್ಯೂಸೆಕ್ಸ್ ನೀರು ನಾರಾಯಣಪುರ ಬ್ಯಾರೇಜ್ಗೆ ಹರಿಬಿಡಲಾಗುತ್ತಿದ್ದು, ರಾಯಚೂರು, ಯಾದಗಿರಿ ಪ್ರದೇಶಗಳಲ್ಲೂ ಪ್ರವಾಹದ ಭೀತಿ ಉಂಟಾಗಿದೆ.