ರಾಜ್ಯ
ಸಿದ್ದಾರ್ಥ್ ಸಾವು: ಐಟಿ ಆಯುಕ್ತ ಬಾಲಕೃಷ್ಣನ್ ವಿರುದ್ಧ ಕ್ರಮ ಜರುಗಿಸುವಂತೆ ಕಾಂಗ್ರೆಸ್ ಆಗ್ರಹ
ಕೆಫೆ ಕಾಫಿ ಡೇ ಮಾಲೀಕ ಹಾಗೂ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಅಳಿಯ ಸಿದ್ದಾರ್ಥ್ ಸಾವಿಗೆ ಕಾರಣರಾದ ಆದಾಯ ತೆರಿಗೆ ಇಲಾಖೆ ಆಯುಕ್ತ....
ಬೆಂಗಳೂರು: ಕೆಫೆ ಕಾಫಿ ಡೇ ಮಾಲೀಕ ಹಾಗೂ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಅಳಿಯ ಸಿದ್ದಾರ್ಥ್ ಸಾವಿಗೆ ಕಾರಣರಾದ ಆದಾಯ ತೆರಿಗೆ ಇಲಾಖೆ ಆಯುಕ್ತ ಬಾಲಕೃಷ್ಣನ್ ಅವರ ವಿರುದ್ಧ ಕ್ರಮ ಜರುಗಿಸವಂತೆ ಕಾಂಗ್ರೆಸ್ ಒತ್ತಾಯಿಸಿದೆ.
ಮೃತ ಉದ್ಯಮಿ ಸಿದ್ದಾರ್ಥ್ ಅವರ ಮರಣಪತ್ರ ಪರಿಗಣಿಸಿ ಸೆಕ್ಷನ್ 306ರ ಪ್ರಕಾರ ತೆರಿಗೆ ಇಲಾಖೆ ಆಯುಕ್ತ ಬಾಲಕೃಷ್ಣನ್ ಅವರ ವಿರುದ್ಧ ಕ್ರಮಜರುಗಿಸಬೇಕು ಎಂದು ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಠೋಡ್ ಅವರು ಆಗ್ರಹಿಸಿದ್ದಾರೆ.
ಇಂದು ಕೆಪಿಸಿಸಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ತೆರಿಗೆ ಭಯೋತ್ಪಾದನೆ ಆರಂಭವಾಗಿದೆ. ಐಟಿ ,ಇಡಿ ಇಲಾಖೆಗಳ ಮೂಲಕ ದ್ವೇಷಪ್ರೇರಿತ ದಾಳಿ ನಡೆಸುತ್ತಿದ್ದು, ದೇಶದಲ್ಲಿ ತುರ್ತು ಪರಿಸ್ಥಿತಿ ವಾತಾವರಣ ಇದೆ ಎಂದು ಆರೋಪಿಸಿದರು.
ಇಂತಹ ದಾಳಿಗಳು ಹಾಗೂ ಸಂಸ್ಥೆಗಳನ್ನು ದುರುದ್ದೇಶಕ್ಕೆ ಬಳಸಿಕೊಂಡಿದ್ದು, ತೆಲುಗುದೇಶಂ ಪಕ್ಷದ ಚೌದರಿ, ಸಿಎಂ ರಮೇಶ್, ವೆಂಕಟೇಶ್ ಸೇರಿದಂತೆ ನಾಲ್ಕು ರಾಜ್ಯಸಭಾ ಸದಸ್ಯರ ಮೇಲೆ ಒತ್ತಡ ಹೇರುವ ಮೂಲಕ ಅವರು ಬಿಜೆಪಿ ಸೇರುವಂತೆ ಮಾಡಲಾಗಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.