ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಅಗ್ನಿಶಾಮಕ ದಳ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಧಾವಿಸಿ ದಿನವಿಡೀ ಶೋಧ ನಡೆಸಿ ಈಜು ತಜ್ಞರಿಂದ ಶೋಧ ಕಾರ್ಯ ನಡೆಸಿ ಶವವನ್ನು ಮೇಲೆತ್ತಲಾಯಿತು. ಈ ಸಂದರ್ಭ ಅಗ್ನಿಶಾಮಕ ಪ್ರಭಾರ ಇನ್ಸ್ಪೆಕ್ಟರ್ ವೆಂಕಟೇಶ್, ಬೆಟ್ಟದಪುರ ಪೊಲೀಸ್ ಠಾಣೆಯ ಪಿಎಸ್ ಎಂ.ಲೋಕೇಶ್, ಎಎಸ್ಐ ಜಗದೀಶ್ ಸಿಬ್ಬಂದಿ ಸೇರಿದಂತೆ ಮೃತ ಕಾರ್ತಿಕ್ ಕುಟುಂಬಸ್ಥರು ಹಾಜರಿದ್ದರು.