ಚಿತ್ರದುರ್ಗ: ಪತಿಯ ಸಾವಿನಿಂದ ಮನನೊಂದು ಪತ್ನಿ ಆತ್ಮಹತ್ಯೆಗೆ ಯತ್ನ, ಮಗು ಸಾವು

ಕೌಟುಂಬಿಕ ಕಲಹದಿಂದ ಶನಿವಾರ ಪತಿ ನೇಣಿಗೆ ಶರಣಾಗಿದ್ದು, ಇದರಿಂದ ಮನನೊಂದ ಪತ್ನಿ ಮಗುವಿನೊಂದಿಗೆ ಲಾರಿ ಕೆಳಕ್ಕೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದಾಗ ..
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಚಿತ್ರದುರ್ಗ: ಕೌಟುಂಬಿಕ ಕಲಹದಿಂದ ಶನಿವಾರ ಪತಿ ನೇಣಿಗೆ ಶರಣಾಗಿದ್ದು, ಇದರಿಂದ ಮನನೊಂದ ಪತ್ನಿ ಮಗುವಿನೊಂದಿಗೆ ಲಾರಿ ಕೆಳಕ್ಕೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದಾಗ ಮಗು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಖಜಾನೆ ಇಲಾಖೆಯಲ್ಲಿ ಮುಖ್ಯ ಲೆಕ್ಕಿಗನಾಗಿ ಕಾರ್ಯನಿರ್ವಹಿಸುತ್ತಿದ್ದ ನಾರಾಯಣಪ್ಪ (35) ಕೆಳಗೋಟೆ ಬಡಾವಣೆಯಲ್ಲಿರುವ ತಮ್ಮ ನಿವಾಸದಲ್ಲಿ ಶನಿವಾರ ನೇಣಿಗೆ ಶರಣಾಗಿದ್ದರು.
ಇದನ್ನು ಕಂಡ ಅವರ ಪತ್ನಿ ರಮ್ಯಾ (30), ತಮ್ಮ 2 ವರ್ಷದ ಹೆಣ್ಣುಮಗು ಆದ್ಯಾಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದರು. 
ಹೀಗಾಗಿ ಹತ್ತಿರದಲ್ಲಿದ್ದ ರಾಷ್ಟ್ರೀಯ ಹೆದ್ದಾರಿ ಬಳಿ ಹಾದುಹೋಗುತ್ತಿದ್ದ ಲಾರಿ ಎದುರು ಮಗುವಿನೊಂದಿಗೆ ಅವರು ಜಿಗಿದಿದ್ದಾರೆ. ಘಟನೆಯಲ್ಲಿ ಮಗು ಮೃತಪಟ್ಟರೆ, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com