ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ವೈದ್ಯಕೀಯ ಸೂಪರಿಂಟೆಂಡೆಂಟ್ ವಿ ಜಿ ಸಿದ್ದಾರ್ಥ್ ಅವರ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಯನ್ನು ತನಿಖಾಧಿಕಾರಿಗೆ ಸಲ್ಲಿಸಿದ್ದಾರೆ, ಆದರೆ ವರದಿ ಬಗ್ಗೆ ಪೊಲೀಸರು ಯಾವುದೇ ಹೇಳಿಕೆ ನೀಡಿಲ್ಲ. ಸಿದ್ದಾರ್ಥ್ ಸಾವಿನ ಹಿಂದೆ ಕೊಲೆ ಅಥವಾ ಇನ್ನಾವುದೇ ರೀತಿಯ ಸಂಚು ಕೆಲಸ ಮಾಡಿದೆ ಎಂಬ ಊಹಾಪೋಹಗಳನ್ನು ವರದಿಯ ಸಾರ ತಳ್ಳಿಹಾಕಿದೆ ಎಂದು ತಿಳಿದುಬಂದಿದೆ.