ಸದ್ಯ ಯಡಿಯೂರಪ್ಪನವರಿಗೆ ಬಜೆಟ್ ಮೇಲೆ ಗಮನ ಕೇಂದ್ರೀಕರಿಸಲು ಸಾಧ್ಯವಾಗುತ್ತಿಲ್ಲ. ಸಚಿವ ಸಂಪುಟ ರಚನೆ, ಅನರ್ಹ ಶಾಸಕರ ವಿಚಾರ ಮೊದಲಾದ ವಿಷಯಗಳಿವೆ. ಅದರ ಬಳಿಕವಷ್ಟೇ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮತ್ತು ಸರ್ಕಾರಕ್ಕೆ ಹಣಕಾಸು ಸಲಹೆಗಾರರ ನೇಮಕ ಕುರಿತು ಯಡಿಯೂರಪ್ಪನವರು ಗಮನ ಹರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.