ಮೂಲಗಳ ಪ್ರಕಾರ ಬೆಂಗಳೂರಿನಿಂದ 9 ಜನ ಸ್ನೇಹಿತರು ಪ್ರವಾಸಕ್ಕೆಂದು ಆಗಮಿಸಿದ್ದರು. ಮಹದೇಶ್ವರ ಸ್ವಾಮಿ ದೇಗುಲಕ್ಕೆ ತೆರಳಿದ ಸ್ನೇಹಿತರು ಇಲ್ಲಿನ ಅಂತರಗಂಗೆಯಲ್ಲಿ ಸ್ನಾನಕ್ಕೆ ಇಳಿದಿದ್ದಾರೆ. ಈ ಪೈಕಿ ಪ್ರಭುಗೆ ಮಾತ್ರ ಈಜು ಬರುತ್ತಿದ್ದರಿಂದ ಆತ ನೀರಿಗೆ ಧುಮುಕಿದ್ದಾನೆ. ಬಳಿಕ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿದ್ದಾನೆ. ಅಲ್ಲಿದ್ದ ಬೇರೆ ಯಾವ ಗೆಳೆಯರಿಗೂ ಈಜು ಬಾರದ ಹಿನ್ನೆಲೆಯಲ್ಲಿ ಮುಳುಗುತ್ತಿದ್ದ ಸ್ನೇಹಿತನನ್ನು ರಕ್ಷಿಸಲಾಗದೇ ಕೂಗಾಡಿ ಕೊನೆಗೆ ಪೋಲಿಸರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.