ಬಿಜೆಪಿ ಗೋ ಸಂರಕ್ಷಣಾ ಪ್ರಕೋಷ್ಠದಿಂದ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿಕುಮಾರ್ , ಕರ್ನಾಟಕದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. 1959ರಿಂದಲೇ ಕರ್ನಾಟಕ ಪ್ರಾಣಿ ಬಲಿ ನಿಷೇಧ ಕಾಯ್ದೆ ಜಾರಿಯಲ್ಲಿದ್ದು, ಹಿಂದೂಗಳಿಗೆ ಮಾತ್ರ ಅನ್ವಯಿಸುವಂತೆ ಜಾರಿ ಮಾಡಲಾಗಿತ್ತು. ಆದರೆ, 1975ರಲ್ಲಿ ವಿಧೇಯಕ ಎಲ್ಲಾ ಧರ್ಮ, ವರ್ಗದವರಿಗೆ ಅನ್ವಯಿಸುವಂತೆ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ ಎಂದು ಹೇಳಿದ್ದಾರೆ.