ಮಹಾರಾಷ್ಟ್ರದ ಜಲಾಶಯದಿಂದ ಕೃಷ್ಣಾ ನದಿಗೆ 3 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದ್ದು, ಇದು 4 ಲಕ್ಷ ಕ್ಯೂಸೆಕ್ ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಹಿಡಕಲ್ ಜಲಾಶಯ ಕೂಡ ಭರ್ತಿಯಾಗಿದ್ದು, ಒಂದು ಲಕ್ಷ ಕ್ಯೂಸೆಕ್ ಒಳಹರಿವು ಇದ್ದು, ಇದೇ ಪ್ರಮಾಣದಲ್ಲಿ ನೀರನ್ನು ಜಲಾಶಯದಿಂದ ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ಕೃಷ್ಣಾ ಮತ್ತು ಘಟಪ್ರಭಾ ನದಿಪಾತ್ರದ ಜನರು ಆದಷ್ಟು ಬೇಗ ಸುರಕ್ಷಿತ ಸ್ಥಳಕ್ಕೆ ತೆರಳಬೇಕು. ಸೇನೆ, ಪೊಲೀಸ್, ಅಗ್ನಿಶಾಮಕ ದಳ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಅನೇಕ ತಂಡಗಳು ಜನ ಮತ್ತು ಜಾನುವಾರುಗಳನ್ನು ಸ್ಥಳಾಂತರಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಹೇಳಿದ್ದಾರೆ.