ಚಿಕ್ಕೋಡಿ, ಹುಕ್ಕೇರಿ, ಗೋಕಾಕ, ಅಥಣಿ, ರಾಯಬಾಗ ತಾಲ್ಲೂಕುಗಳಲ್ಲಿ ಹೆಚ್ಚು ಹಾನಿ ಸಂಭವಿಸಿದೆ. ಸಮರ್ಪಕ ರಕ್ಷಣಾ ಕೇಂದ್ರಗಳ ಸ್ಥಾಪನೆಗೆ ಸೂಚನೆ ನೀಡಲಾಗಿದೆ. ಜಿಲ್ಲೆಯ ಐದು ನದಿಗಳ ನೀರು ಸೇರಿದಂತೆ 5 ಲಕ್ಷ ಕ್ಯುಸೆಕ್ ನೀರು ಕೃಷ್ಣೆಯ ಮೂಲಕ ಹರಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಪ್ರವಾಹದಲ್ಲಿ ಸಿಲುಕಿರುವ ಜನರ ರಕ್ಷಣೆಗೆ ಜಿಲ್ಲಾಡಳಿತ ಎಲ್ಲ ರೀತಿಯ ಪ್ರಯತ್ನ ನಡೆಸಿದೆ. ಇದಕ್ಕಾಗಿ ಹೆಲಿಕಾಪ್ಟರ್ ನಿಯೋಜನೆ ಮಾಡಲಾಗುವುದು ಎಂದರು.