ಪ್ರವಾಹ ಪರಿಸ್ಥಿತಿಯಿಂದ ನೂರಾರು ಗ್ರಾಮಗಳು ಜಲಾವೃತವಾಗಿದ್ದು, ಸಾವಿರಾರು ಮಂದಿ ಸಂತ್ರಸ್ತರಾಗಿದ್ದಾರೆ. ಬೆಳಗಾವಿ, ಗೋಕಾಕ್, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ, ಧಾರವಾಡ, ಕಾರವಾರ ಸೇರಿದಂತೆ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ರಾಜ್ಯಾದ್ಯಂತ ಮಳೆ ಮತ್ತು ಪ್ರವಾಹದ ಹಾನಿಯಿಂದ ಈವರೆಗೆ 6 ಮಂದಿ ಸಾವನ್ನಪ್ಪಿದ್ದಾರೆ.