'ಪ್ರೀತಿ ವಿಶ್ವಾಸದ ಮಡಿಲಲ್ಲಿ ಹಾಕಿಕೊಂಡು ಬೆಳೆಸಿದ ತಾಯಿಯ ಅಗಲಿಕೆಯ ದುಃಖವನ್ನು ಭರಿಸಲಾಗುತ್ತಿಲ್ಲ'

ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಅಗಲಿಕೆಗೆ ಸಂತಾಪ ಸೂಚಿಸಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಫೇಸ್‌ಬುಕ್ ಪೋಸ್ಟ್ ಹಾಕಿದ್ದಾರೆ. ..
ಸುಷ್ಮಾ ಸ್ವರಾಜ್
ಸುಷ್ಮಾ ಸ್ವರಾಜ್
ಬೆಂಗಳೂರು: ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಅಗಲಿಕೆಗೆ ಸಂತಾಪ ಸೂಚಿಸಿ ಮಾಜಿ ಸಚಿವ ಗಾಲಿ ಜನಾರ್ದನ  ರೆಡ್ಡಿ ಅವರು ಫೇಸ್‌ಬುಕ್ ಪೋಸ್ಟ್ ಹಾಕಿದ್ದಾರೆ. 
ಕೊಟ್ಟ ಮಾತಿನಂತೆ ಸತತ 13ವರ್ಷಗಳ ಕಾಲ ಸುಷ್ಮಾ ಅವರು ಬಳ್ಳಾರಿಗೆ ಬಂದು ಉಚಿತ ಸಾಮೂಹಿಕ ವಿವಾಹ ಹಾಗೂ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸುತ್ತಿದ್ದುದನ್ನೂ ಅವರು ನೆನಪಿಸಿಕೊಂಡಿದ್ದಾರೆ.
ಅವರು ಭಾರತಾಂಬೆಯ ಹೆಮ್ಮೆಯ ಪುತ್ರಿ. ಭಾರತೀಯ ನಾರಿ ಸ್ವರೂಪದ ಪ್ರತಿರೂಪ ಎಂದಿದ್ದಾರೆ. ದೇಶಭಕ್ತಿ, ಸಾಮಾಜಿಕ ಕಳಕಳಿ, ಎಲ್ಲಕ್ಕಿಂತ ಹೆಚ್ಚಾಗಿ ನಂಬಿಕೆ, ಪ್ರೀತಿ, ವಿಶ್ವಾಸದ ಮತ್ತೊಂದು ಹೆಸರು ಸುಷ್ಮಾ ಸ್ವರಾಜ್​ಎಂದು ಬರೆದಿದ್ದಾರೆ.
ತಾಯಿಯ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿ ನಾನು ಸೇರಿದಂತೆ ಇಡೀ ದೇಶದ ಜನತೆಗೆ ಆ ಭಗವಂತ ಕರುಣಿಸಲಿ ಎಂದು ಹೇಳಲಾಗದ ನೋವಿನಿಂದ ಭಕ್ತಿ ಪೂರ್ವಕವಾಗಿ ಪ್ರಾರ್ಥಿಸುತ್ತೇನೆ. ವರಮಹಾಲಕ್ಷ್ಮಿ ವ್ರತದ ಈ ದಿನಗಳಲ್ಲಿ ತಾಯಿಯ ಅಗಲುವಿಕೆಯ ಈ ಸುದ್ದಿ ನಮಗೆ ಬರ ಸಿಡಿಲು ಬಡಿದು ಅಪ್ಪಳಿಸಿದಂತಾಗಿದೆ ಎಂದು ಅವರು ಬರೆದುಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com