'ಕುಮಾರಸ್ವಾಮಿ, ಅವರಪ್ಪನಿಗೆ ವಯಸ್ಸಾಗಿಲವೇ':  ಕೆಎಸ್ ಈಶ್ವರಪ್ಪ  

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ
'ಕುಮಾರಸ್ವಾಮಿ, ಅವರಪ್ಪನಿಗೆ ವಯಸ್ಸಾಗಿಲವೇ':  ಕೆಎಸ್ ಈಶ್ವರಪ್ಪ  

ಶಿವಮೊಗ್ಗ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಶಿವಮೊಗ್ಗ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಹಾಗೂ ಅವರಪ್ಪ ಮಾಜಿ ಪ್ರಧಾನಿ ದೇವೇಗೌಡರಿಗೆ ವಯಸ್ಸಾಗಿಲ್ಲವೇ , ಅವರು ನೆರೆ ಪ್ರದೇಶಕ್ಕೆ ಭೇಟಿ ನೀಡುವುದನ್ನು ಸ್ವಾಗತಿಸುತ್ತೇನೆ ಆದರೆ, ವಯಸ್ಸಾಗಿದೆ ಎಂದು ಕೀಳುಮಟ್ಟದ ಹೇಳಿಕೆ ನೀಡುವುದು ಶೋಭೆ ತರುವುದಿಲ್ಲ ಎಂದು ಟೀಕಿಸಿದರು.

ಕುಮಾರಸ್ವಾಮಿ ರಾಜಕಾರಣ ಮಾಡಿದರೆ ನಮಗೂ ರಾಜಕಾರಣ ಮಾಡುವುದಕ್ಕೆ ಬರುತ್ತದೆ. ಆದರೆ, ಇದು ರಾಜಕಾರಣ ಮಾಡುವ ಸಮಯವಲ್ಲ, ರಾಜ್ಯದ ಜನ ನೆರೆ , ಅತಿವೃಷ್ಟಿಯಿಂದ ಪರಿತಪಿಸುತ್ತಿದ್ದಾರೆ. ಎಲ್ಲಾ ಪಕ್ಷದವರು ಒಟ್ಟಾಗಿ ಪರಿಹಾರ ಹುಡುಕುವುದು ಸೂಕ್ತ ಎಂದು ಕೆ. ಎಸ್. ಈಶ್ವರಪ್ಪ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com