ಕೇಂದ್ರ ಸರ್ಕಾರ ಕೂಡಲೇ 10 ಸಾವಿರ ಕೋಟಿ ರೂ. ಬಿಡುಗಡೆ ಮಾಡುವಂತೆ ಯಡಿಯೂರಪ್ಪ ಒತ್ತಾಯ

 ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ ಗಂಭೀರವಾಗಿದ್ದು, ಕೇಂದ್ರ ಸರ್ಕಾರ ಕೂಡಲೇ 10 ಸಾವಿರ ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಒತ್ತಾಯಿಸಿದ್ದಾರೆ.
ಕೇಂದ್ರ ಸರ್ಕಾರ ಕೂಡಲೇ 10 ಸಾವಿರ ಕೋಟಿ ರೂ. ಬಿಡುಗಡೆ ಮಾಡುವಂತೆ ಯಡಿಯೂರಪ್ಪ ಒತ್ತಾಯ

ಶಿವಮೊಗ್ಗ:  ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ ಗಂಭೀರವಾಗಿದ್ದು, ಕೇಂದ್ರ ಸರ್ಕಾರ ಕೂಡಲೇ 10 ಸಾವಿರ ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಒತ್ತಾಯಿಸಿದ್ದಾರೆ.

ಪ್ರವಾಹದಿಂದ 40 ಹೆಕ್ಟೇರ್ ಜಮೀನು ಹಾನಿಯಾದ ತೀರ್ಥಹಳ್ಳಿ ತಾಲೂಕಿನ ಹೆಗಲಟ್ಟಿ ಗ್ರಾಮಕ್ಕೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ ಯಡಿಯೂರಪ್ಪ,  ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಪ್ರವಾಹ ಉಂಟಾಗಿದೆ. ಗೃಹ ಸಚಿವ ಅಮಿತ್ ಶಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವೈಮಾನಿಕ ಸಮೀಕ್ಷೆ ನಡೆಸಿದ್ದು, ಪ್ರವಾಹದಿಂದಾಗಿ 50 ಸಾವಿರ ಕೋಟಿ ರೂಪಾಯಿ ಹಾನಿ ಸಂಭವಿಸಿದೆ ಎಂದು ತಿಳಿಸಿದರು.

ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಚರ್ಚಿಸಲು ಆಗಸ್ಟ್ 16 ರಂದು ದೆಹಲಿಗೆ ತೆರಳುವುದಾಗಿ ಅವರು ಹೇಳಿದರು.

ಶಿವಮೊಗ್ಗ ಜಿಲ್ಲೆಯ ಸ್ಥಳೀಯ ಶಾಸಕರನ್ನು ಭೇಟಿ ಮಾಡಿ ಪರಿಸ್ಥಿತಿ ನಿರ್ವಹಣೆ ಬಗ್ಗೆ ಚರ್ಚೆ ನಡೆಸುವುದಾಗಿ ಯಡಿಯೂರಪ್ಪ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com