ಹಾಸನ: ಬೈಕ್‍ಗೆ ಕಾರು ಡಿಕ್ಕಿ, ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ದುರ್ಮರಣ

ಬೈಕ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ಹೊಳೆನರಸೀಪುರ ತಾಲೂಕಿನ ಸಿಗರನಹಳ್ಳಿ ಬಳಿ ಇಂದು ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಹಾಸನ: ಬೈಕ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ಹೊಳೆನರಸೀಪುರ ತಾಲೂಕಿನ ಸಿಗರನಹಳ್ಳಿ ಬಳಿ ಇಂದು ನಡೆದಿದೆ.

ಸಿಗರನಹಳ್ಳಿ ನಿವಾಸಿಗಳಾದ ಉಮೇಶ್(23) ಹಾಗೂ ಹರೀಶ್(22) ಮೃತಪಟ್ಟ ಯುವಕರು. ಹಾಸನ ನಗರದಿಂದ ಬೈಕ್ ನಲ್ಲಿ ಹೊಳೆನರಸೀಪುರ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಕಾರು ಚಾಲಕನಿಗೂ ಗಂಭೀರವಾಗಿ ಗಾಯವಾಗಿದೆ.

ಸುದ್ದಿ ತಿಳಿದ ತಕ್ಷಣ ಹೊಳೆನರಸೀಪುರ ನಗರ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com