ಬೆಳ್ತಂಗಡಿ ತಾಲೂಕಿನಿಂದ ಪಾಕಿಸ್ತಾನಕ್ಕೆ ಸ್ಯಾಟ್ ಲೈಟ್ ಕರೆ ಹೋಗಿಲ್ಲ- ಎಸ್ಪಿ ಲಕ್ಷ್ಮೀ ಪ್ರಸಾದ್ ಟ್ವೀಟ್ 

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಿಂದ ಪಾಕಿಸ್ತಾನಕ್ಕೆ ಉಪಗ್ರಹದ ಮೂಲಕ ಯಾವುದೇ ದೂರವಾಣಿ ಕರೆ ಹೋಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಟ್ವೀಟ್ ಮಾಡಿದ್ದಾರೆ.
ಎಸ್ಪಿ ಲಕ್ಷ್ಮೀ ಪ್ರಸಾದ್
ಎಸ್ಪಿ ಲಕ್ಷ್ಮೀ ಪ್ರಸಾದ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಿಂದ ಪಾಕಿಸ್ತಾನಕ್ಕೆ ಉಪಗ್ರಹದ ಮೂಲಕ ಯಾವುದೇ ದೂರವಾಣಿ ಕರೆ ಹೋಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಭಯೋತ್ಪಾದಕ ದಾಳಿ ಶಂಕೆಯಿಂದ ಕಟ್ಟೆಚ್ಚರ ಘೋಷಿಸಲಾದ ಬೆನ್ನಲ್ಲೇ, ದೆಹಲಿಯಲ್ಲಿ ಸೆ

ರೆ ಸಿಕ್ಕ ಶಂಕಿತ ಉಗ್ರನೊಬ್ಬ ಬೆಳ್ತಂಗಡಿಯಿಂದ ಪಾಕಿಸ್ತಾನಕ್ಕೆ ಉಪಗ್ರಹದ ಮೂಲಕ ದೂರವಾಣಿ ಕರೆ ಮಾಡಿರುವ ಬಗ್ಗೆ ಬಾಯ್ಬಿಟ್ಟಿದ್ದು, ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಕರಾವಳಿಗೆ ಬಂದು ತನಿಖೆ ನಡೆಸುತ್ತಿದ್ದಾರೆ ಎಂಬ ವದಂತಿ ಹರಡಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ಎಸ್ಪಿ, ಜಿಲ್ಲೆಯಿಂದ ಯಾವುದೇ ಕರೆ ಹೋಗಿಲ್ಲ, ರಾಷ್ಟ್ರೀಯ ತನಿಖಾ ತಂಡದ ಅಧಿಕಾರಿಗಳು ಜಿಲ್ಲೆಗೆ ಬಂದಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಸ್ಪಷ್ಪಪಡಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com