ಹಾಸನ: ರೌಡಿಶೀಟರ್ ಒಬ್ಬನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಇಲ್ಲಿನ ಚನ್ನರಾಯಪಟ್ಟಣದಲ್ಲಿ ನಡೆದಿದೆ.
ಹಡೆನಹಳ್ಳಿ ಹರೀಶ ಕೊಲೆಯಾದ ರೌಡಿಶೀಟರ್. ಧನಲಕ್ಷ್ಮಿ ಥಿಯೇಟರ್ ಹತ್ತಿರದ ಬಾರ್ ನಲ್ಲಿ ಕುಡಿದು ಹೊರ ಬಂದಾಗ ಈತನನ್ನು ದುಷ್ಕರ್ಮಿಗಳು ಚಾಕುವಿನಿಂದ ತಿವಿದು ಹತ್ಯೆ ಮಾಡಿದ್ದಾರೆ.
ಕಳೆದ 2 ವರ್ಷಗಳ ಹಿಂದೆ ಶಿವ ಎಂಬುವನನ್ನು ಕೊಲೆ ಮಾಡಿದ್ದ ಆರೋಪಿ ಹರೀಶ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಎಂದು ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಡಾ. ಎ.ಎನ್.ಪ್ರಕಾಶ ಗೌಡ ತಿಳಿಸಿದ್ದಾರೆ.
ಸುದ್ದಿ ತಿಳಿದ ಚನ್ನರಾಯಪಟ್ಟಣ ನಗರ ಠಾಣೆ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದು ಮೃತದೇಹವನ್ನು ಶವ ಪರೀಕ್ಷೆಗೆ ಸಕಾ೯ರಿ ಆಸ್ಪತ್ರೆಗೆ ಸಾಗಿಸಲಾಗಿದೆ.
Advertisement