ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ: ಗುಂಡು ಹಾರಿಸಿ ರೌಡಿ ಶೀಟರ್ ಬಂಧನ

ವಿವಿಧ ಅಪರಾಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ರೌಡಿಶೀಟರ್ ಸೈಲೆಂಟ್ ಸುನೀಲನ ಶಿಷ್ಯನ ಎಡಗಾಲಿಗೆ ರಾಮನಗರ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರಾಮನಗರ: ವಿವಿಧ ಅಪರಾಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ರೌಡಿಶೀಟರ್ ಸೈಲೆಂಟ್ ಸುನೀಲನ ಶಿಷ್ಯನ ಎಡಗಾಲಿಗೆ ರಾಮನಗರ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ರೌಡಿಶೀಟರ್ ರೇಣುಕಾ ಪ್ರಸಾದ್ ಅಲಿಯಾಸ್ ನರಿ ಗುಂಡೇಟಿಗೆ ಒಳಗಾದ ಆರೋಪಿ. 5 ಕೊಲೆ ಪ್ರಕರಣದಲ್ಲಿ ಈತ ಪೊಲೀಸರಿಗೆ ಬೇಕಾಗಿದ್ದ. ಇತ್ತೀಚೆಗೆ ಬೆಂಗಳೂರಿನ ನಂದಿನಿ ಲೇಔಟ್‍ನಲ್ಲಿ ನಡೆದ ಕೊಲೆ ಪ್ರಕರಣವೊಂದರಲ್ಲಿ ಈತ ಭಾಗಿಯಾಗಿದ್ದ ಆರೋಪವಿದೆ.

ತಡರಾತ್ರಿ ಬೆಂಗಳೂರು ದಕ್ಷಿಣ ತಾಲೂಕಿನ ಚಂದ್ರಪ್ಪ ವೃತ್ತದ ಬಳಿಯ ಬಾರ್ ವೊಂದರಲ್ಲಿ ಕುಡಿದು ಗಲಾಟೆ ಮಾಡಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ 70 ಸಾವಿರ ದೋಚಿ ಪರಾರಿಯಾಗಿದ್ದನು. ನಂತರ ಕುಂಬಳಗೂಡು ಸಮೀಪದ ವಿನಾಯಕನಗರದ ಶ್ರೀನಿಧಿ ಲಾಡ್ಜ್ ನಲ್ಲಿ ಅವಿತಿದ್ದ ರೌಡಿಶೀಟರ್ ರೇಣುಕಾ ಪ್ರಸಾದ್‍ನನ್ನು ಹಿಡಿಯಲು ತೆರಳಿದ್ದ ಮಾಗಡಿ ಸರ್ಕಲ್ ಇನ್ಸ್ ಪೆಕ್ಟರ್ ರವಿ ಹಾಗೂ ಸಿಬ್ಬಂದಿ ಮೇಲೆ ಡ್ರ್ಯಾಗರ್ ನಿಂದ ಹಲ್ಲೆಗೆ ಮುಂದಾಗಿ ಪೇದೆ ಹುಲಿರಾಯ ಎಂಬವರಿಗೆ ಇರಿದಿದ್ದಾನೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com