ಅಡಿಕೆ ಕದಿಯಲು ಬಂದವನ ಮೇಲೆ ಗುಂಡಿನ ದಾಳಿ: ಕಳ್ಳ ಸ್ಥಳದಲ್ಲೇ ಸಾವು

ಅಡಿಕೆ ಕದಿಯಲು ಬಂದಿದ್ದ ಕಳ್ಳನೊಬ್ಬನ ಮೇಲೆ ಮನೆಯ ಮಾಲೀಕ ಗುಂಡು ಹಾರಿಸಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಕರಿಕೆ ಎಂಬಲ್ಲಿ ನಡೆದಿದೆ.
ಅಡಿಕೆ ಕದಿಯಲು ಬಂದವನ ಮೇಲೆ ಗುಂಡಿನ ದಾಳಿ: ಕಳ್ಳ ಸ್ಥಳದಲ್ಲೇ ಸಾವು
ಅಡಿಕೆ ಕದಿಯಲು ಬಂದವನ ಮೇಲೆ ಗುಂಡಿನ ದಾಳಿ: ಕಳ್ಳ ಸ್ಥಳದಲ್ಲೇ ಸಾವು

ಮಡಿಕೇರಿ: ಅಡಿಕೆ ಕದಿಯಲು ಬಂದಿದ್ದ ಕಳ್ಳನೊಬ್ಬನ ಮೇಲೆ ಮನೆಯ ಮಾಲೀಕ ಗುಂಡು ಹಾರಿಸಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಕರಿಕೆ ಎಂಬಲ್ಲಿ ನಡೆದಿದೆ.

ದೇವಂಗೋಡಿ ನಿವಾಸಿ ಗಣೇಶ್​ ಮೃತಪಟ್ಟವರು. ಮಂಡೇಡಿ ಮೊಣ್ಣಪ್ಪ ಅವರ ಮನೆಯಲ್ಲಿದ್ದ ಅಡಿಕೆ ದಾಸ್ತಾನನ್ನು ಕದಿಯಲು ಗಣೇಶ್​ ಗುರುವಾರ ರಾತ್ರಿ ಬಂದಿದ್ದಾನೆ. ಸದ್ದು ಕೇಳಿ ಹೊರಬಂದ ಮಂಡೇಡಿ ಮೊಣ್ಣಪ್ಪ ಅವರು ಮನೆಯಲ್ಲಿದ್ದ ಬಂದೂಕಿನಿಂದ ಗುಂಡು ಹಾರಿಸಿದ್ದಾರೆ. ಗುಂಡ ತಲುಗಿ ಗಣೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 

ವಿಷಯ ತಿಳಿದ ಭಾಗಮಂಡಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com