'ಹಿಂದೂ ಯುವತಿಯರನ್ನು ಸಿಕ್ಕಲ್ಲಿ ಅತ್ಯಾಚಾರ ಮಾಡಿ ಪೆಟ್ರೋಲ್ ಸುರಿದು ಸುಟ್ಟಾಕಿ': ಫೇಸ್ ಬುಕ್ ಪೋಸ್ಟ್ ಹಾಕಿದವನ ಬಂಧನ 

ತೆಲಂಗಾಣದಲ್ಲಿ ಪ್ರಿಯಾಂಕ ರೆಡ್ಡಿ ಅತ್ಯಾಚಾರ, ಕೊಲೆ ಪ್ರಕರಣದ ಅಪರಾಧಿಗಳಿಗೆ ಸಾರ್ವಜನಿಕವಾಗಿ ಶಿಕ್ಷೆ ವಿಧಿಸುವಂತೆ ಆಗ್ರಹ ಹೆಚ್ಚುತ್ತಿದೆ.
'ಹಿಂದೂ ಯುವತಿಯರನ್ನು ಸಿಕ್ಕಲ್ಲಿ ಅತ್ಯಾಚಾರ ಮಾಡಿ ಪೆಟ್ರೋಲ್ ಸುರಿದು ಸುಟ್ಟಾಕಿ': ಫೇಸ್ ಬುಕ್ ಪೋಸ್ಟ್ ಹಾಕಿದವನ ಬಂಧನ
'ಹಿಂದೂ ಯುವತಿಯರನ್ನು ಸಿಕ್ಕಲ್ಲಿ ಅತ್ಯಾಚಾರ ಮಾಡಿ ಪೆಟ್ರೋಲ್ ಸುರಿದು ಸುಟ್ಟಾಕಿ': ಫೇಸ್ ಬುಕ್ ಪೋಸ್ಟ್ ಹಾಕಿದವನ ಬಂಧನ

ಹಾವೇರಿ: ತೆಲಂಗಾಣದಲ್ಲಿ ಪ್ರಿಯಾಂಕ ರೆಡ್ಡಿ ಅತ್ಯಾಚಾರ, ಕೊಲೆ ಪ್ರಕರಣದ ಅಪರಾಧಿಗಳಿಗೆ ಸಾರ್ವಜನಿಕವಾಗಿ ಶಿಕ್ಷೆ ವಿಧಿಸುವಂತೆ ಆಗ್ರಹ ಹೆಚ್ಚುತ್ತಿದೆ. ಈ ಬೆನ್ನಲ್ಲೇ ಮತ್ತೊಂದು ವಿವಾದ ಉಂಟಾಗಿದ್ದು, ಹಿಂದೂ ಯುವತಿಯರನ್ನು ಸಿಕ್ಕಲ್ಲಿ ಅತ್ಯಾಚಾರ ಮಾಡಿ ಪೆಟ್ರೋಲ್ ಸುರಿದು ಸುಟ್ಟಾಕಿ ಎಂದು ಫೇಸ್ ಬುಕ್ ನಲ್ಲಿ ಸಲೀಂ ಅಹ್ಮದ್ ಎಂಬ ವ್ಯಕ್ತಿ ಕರೆ ನೀಡಿದ್ದಾನೆ. 

ಈ ಸಲೀಂ ಅಹ್ಮದ್ ಹಾವೇರಿಯ ಜಿಲ್ಲೆಯವನಾಗಿದ್ದು, ಹಿಂದೂ ಯುವತಿಯರನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡುವ ಪೋಸ್ಟ್ ಹಾಕಿದ ಬೆನ್ನಲ್ಲೇ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಸಲೀಂ ಅಹ್ಮದ್ ಪೋಸ್ಟ್ ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕೆಲವು ಸಂಘಟನೆಗಳು ಇದನ್ನು ಗುರುತಿಸಿ ಈ ಕಿಡಿಗೇಡಿಯ ಬಂಧನಕ್ಕೆ ಆಗ್ರಹಿಸಿದ್ದವು. 

ಪೋಸ್ಟ್ ಹಾಕಿದ್ದ ಕೆಲವೇ ಗಂಟೆಗಳಲ್ಲಿ ಹಾವೇರಿಯ ಹಂಸಭಾವಿ ಪೊಲೀಸರು ಈತನನ್ನು ಬಂಧಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com