ಬೀದರ್: ನಡು ರಸ್ತೆಯಲ್ಲೇ ಕಾರೊಂದು ಹೊತ್ತಿ ಉರಿದ ಪರಿಣಾಮ ಮಹಿಳೆಯೊಬ್ಬರು ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಹುಮನಾಬಾದ್ ತಾಲೂಕಿನ ನಿರ್ಣಾ ಕ್ರಾಸ್ ಬಳಿ ಗುರುವಾರ ಬೆಳಗ್ಗೆ ನಡೆದಿದೆ.
ಏಕಾಏಕಿ ಕಾರಿನ ಹಿಂಬದಿಯ ಎಸಿ ಬಿಸಿಯಾಗಿ ಸ್ಫೋಟಗೊಂಡ ಪರಿಣಾಮ ಕಾರು ಹೊತ್ತಿ ಉರಿದು ಮಹಿಳೆ ಸಜೀವ ದಹನವಾದ ಹೃದಯ ವಿದ್ರಾವಕ ಘಟನೆ ಬೀದರ್ ನಲ್ಲಿ ನಡೆದಿದೆ.
ಕಾರಿಗೆ ಬೆಂಕಿ ತಗುಲಿದ ಗಲಿಬಿಲಿಯಲ್ಲಿ ಸೀಟ್ ಬೆಲ್ಟ್ ತೆಗೆಯಲಾಗದೆ ಕಾರಿನಲ್ಲೆ 42 ವರ್ಷದ ಕಲ್ಯಾಣಿ ಎಂಬ ಮಹಿಳೆ ಸಜೀವ ದಹನವಾಗಿರುವ ಘಟನೆ ನಡೆದಿದೆ.
ಒಂದೇ ಕುಟುಂಬದ ನಾಲ್ಕು ಜನ ಕಾರಿನಲ್ಲಿ ಇಂದು ಬೆಳಗಿನ ಜಾವ ಮಹಾರಾಷ್ಟ್ರ ಉದಗೀರ್ ನಿಂದ ಹೈದ್ರಾಬಾದ್ ಗೆ ತೆರಳುತ್ತಿರುವಾಗ ಈ ಘಟನೆ ನಡೆದಿದೆ. ಪತಿ ಉದಯ ಕುಮಾರ್ ಹಾಗೂ ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತದೆ.
Advertisement