ಹೂವಿನಹಡಗಲಿ: ಶೈಕ್ಷಣಿಕ ಪ್ರವಾಸಕ್ಕಾಗಿ ಹೊರಟಿದ್ದ ಶಾಲಾ ಬಸ್ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ವರದಿಯಾಗಿದೆ.
ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದರೆ, ನಾಲ್ಕು ಜನರಿಗೆ ಗಂಭೀರ ಗಾಯಗಳಾಗಿವೆ.
ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರ ಶುಗರ್ ಕಾರ್ಖಾನೆಯ ಬಳಿ ಹಿರೇಹಡಗಲಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಪಘಾತಕ್ಕೀಡಾದ ಬಸ್ ಹಂಪಸಾಗರ ಸೇವಾಲಾಲ್ ಖಾಸಗಿ ಶಾಲೆಯದ್ದು ಎಂದು ತಿಳಿದುಬಂದಿದೆ.
Advertisement