ಬೆಳಗಾವಿ: ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿಯಾದ ಪರಿಣಾಮ ಮೂವರು ದುರ್ಮರಣಕ್ಕೀಡಾದ ಘಟನೆ ಬೆಳಗಾವಿ ಜಿಲ್ಲೆ ಬೆಳಗಾವಿ ನಗರದ ಹೊರವಲಯದಲಿ ನಡೆಇದೆ.
ಸಂಜೀವ ರಾಜಾಯಿ (29), ಪ್ರಕಾಶ ಚಡಣಿ (27) ಮತ್ತು ಅಡಿವೇಪ್ಪ ಗುಜ್ಜನವರ್ (39) ಮೃತ ದುರ್ದೈವಿಗಳು. ಕೇದನೂರು ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಅಪಘಾತದ ಸ್ಥಳಕ್ಕೆ ಧಾವಿಸಿದ ಪೋಲೀಸರು ಸ್ಥಳ ಪರಿಶೀಲನೆ ನಡೆಸಿದ್ದು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಒಯ್ದಿದ್ದಾರೆ. ಬೆಳಗಾವಿ ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement