ಹುಬ್ಬಳ್ಳಿ- ಸೊಲ್ಲಾಪುರ ಚತುಷ್ಪಥ ಹೆದ್ದಾರಿ ನಿರ್ಮಾಣಕ್ಕೆ ತಾತ್ವಿಕ ಒಪ್ಪಿಗೆ: ಗೋವಿಂದ ಕಾರಜೋಳ

ಹುಬ್ಬಳ್ಳಿ- ಸೊಲ್ಲಾಪುರ ಚತುಷ್ಪಥ ಹೆದ್ದಾರಿ ರಸ್ತೆ ನಿರ್ಮಾಣ ಪ್ರಸ್ತಾವನೆಗೆ ಆರ್ಥಿಕ ಪ್ರಾಮುಖ್ಯತೆ ಹಾಗೂ ಅಂತರ್ ರಾಜ್ಯಗಳ ಸಂಪರ್ಕ ಯೋಜನೆಯಡಿ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ತಾತ್ಪಿಕ ಒಪ್ಪಿಗೆ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ.
ಸಭೆಯಲ್ಲಿ ಸಚಿವರುಗಳು
ಸಭೆಯಲ್ಲಿ ಸಚಿವರುಗಳು

ಬೆಂಗಳೂರು: ಹುಬ್ಬಳ್ಳಿ- ಸೊಲ್ಲಾಪುರ ಚತುಷ್ಪಥ ಹೆದ್ದಾರಿ ರಸ್ತೆ ನಿರ್ಮಾಣ ಪ್ರಸ್ತಾವನೆಗೆ ಆರ್ಥಿಕ ಪ್ರಾಮುಖ್ಯತೆ ಹಾಗೂ ಅಂತರ್ ರಾಜ್ಯಗಳ ಸಂಪರ್ಕ ಯೋಜನೆಯಡಿ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ತಾತ್ಪಿಕ ಒಪ್ಪಿಗೆ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ.


ಬೆಂಗಳೂರಿನಲ್ಲಿ ಇಂದು ಕೇಂದ್ರ ಭೂ ಸಾರಿಗೆ ಸಚಿವರು ನಡೆಸಿದ ಸಭೆಯಲ್ಲಿ, ಹುಬ್ಬಳಿ- ಸೊಲ್ಲಾಪರ ಮಾರ್ಗದಲ್ಲಿ ವಾಹನಗಳ ಸಂಚಾರ ಅಧಿಕ ಪ್ರಮಾಣದಲ್ಲಿದ್ದು, ಈ ಮಾರ್ಗವನ್ನು ಚತುಷ್ಪಥ ರಸ್ತೆಯನ್ನಾಗಿ ನಿರ್ಮಿಸಿದರೆ ಸುಗಮ ಸಂಚಾರ ಹಾಗು ಅಂತರ್ ರಾಜ್ಯ ಸಂಪರ್ಕಕ್ಕೆ ಅನುಕೂಲವಾಗುತ್ತದೆ. ಈ ಮಾರ್ಗವು ಪ್ರಮುಖ ಮಾರ್ಗವಾಗಿದ್ದು, ಈ ಹೆದ್ದಾರಿಯನ್ನು ಚತುಷ್ಪಥ ಹೆದ್ದಾರಿಗೆ ಮೇಲ್ದರ್ಜೆಗೇರಿಸುವ ಪ್ರಾಮುಖ್ಯತೆಯ ಬಗ್ಗೆ ಮನವರಿಕೆ ಮಾಡಿಕೊಡಲಾಯಿತು.

ಕೂಡಲೇ ಕೇಂದ್ರ ಹೆದ್ದಾರಿ ಸಚಿವರು ತಾತ್ವಿಕ ಒಪ್ಪಿಗೆ ನೀಡಿ, ಈ ಚತುಷ್ಪಥ ಹೆದ್ದಾರಿ ಕಾಮಗಾರಿ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆಗೆ ಕ್ರಮಕೈಗೊಳ್ಳುವಂತೆ ಸೂಚಿಸಿರುವುದಾಗಿ ಉಪಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com