ನಕಲಿ ಅಂಕಪಟ್ಟಿ ನೀಡುತ್ತಿದ್ದ ಸಂಸ್ಥೆ ಮೇಲೆ ಸಿಸಿಬಿ ದಾಳಿ: ಇಬ್ಬರು ವಶ

ನಕಲಿ ಅಂಕ ಪಟ್ಟಿ ನೀಡುತ್ತಿದ್ದ ಸಂಸ್ಥೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನಕಲಿ ಅಂಕ ಪಟ್ಟಿ ನೀಡುತ್ತಿದ್ದ ಸಂಸ್ಥೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. 

ನಗರದ ಮಹಾಲಕ್ಷ್ಮಿಲೇಔಟ್ ನಲ್ಲಿರುವ ವೆಂಕಟೇಶ್ವರ ಸಂಸ್ಥೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಸಂಸ್ಥೆಯು ಆಂಧ್ರ ಪ್ರದೇಶ ಮೂಲದ ಶ್ರೀನಿವಾಸ ರೆಡ್ಡಿ ಎಂಬುವವರಿಗೆ ಸೇರಿದೆ ಎಂದು ತಿಳಿದುಬಂದಿದೆ. ದಾಳಿ ವೇಳೆಯಲ್ಲಿ ಎಸ್ ಎಸ್ ಎಲ್ ಸಿ, ಪಿಯುಸಿ ಹಾಗೂ ಪದವಿ ಮಟ್ಟದ ಅಪಾರ ಪ್ರಮಾಣದ ನಕಲಿ ಅಂಕಪಟ್ಟಿ ಪತ್ತೆಯಾಗಿದೆ. 

ಈ ಸಂಸ್ಥೆಯಲ್ಲಿ ಹಲವು ವಿಶ್ವವಿದ್ಯಾಲಯಗಳ ನಕಲಿ ಅಂಕ ಪಟ್ಟಿಗಳನ್ನು ನೀಡಲಾಗುತ್ತಿತ್ತು ಎಂಬ ಅಂಶ ಬೆಳಕಿಗೆ ಬಂದಿದೆ. ನಕಲಿ ಅಂಕಪಟ್ಟಿ ನೀಡಲು 3 ಲಕ್ಷ ರೂ ವರೆಗೆ ಹಣ ಪಡೆಯಲಾಗುತ್ತಿತ್ತು ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯಲ್ಲಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.  ಘಟನೆಗೆ ಸಂಬಂಧಿಸಿದಂತೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com