ಹುಬ್ಬಳ್ಳಿ: ಬಿಜೆಪಿ ಪಕ್ಷ ಹಾಗೂ ಸರ್ಕಾರ ದಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ. ಯಾರಿಂದಲೂ ಯಾವುದೇ ಬೇಡಿಕೆ,ಬೆದರಿಕೆಗಳೂ ಇಲ್ಲ. ಸಿದ್ಧರಾಮಯ್ಯ ಅವರು ಬಾಗಿಲು ಮುಚ್ಚಿಕೊಂಡು ಹೋಗಿದ್ದಾರೆ.
ಈಗ ಬರೀ ಬುರುಡೆ ಬಿಡುತ್ತಿದ್ದಾರೆ ಎಂದು ಆರ್ ಅಶೋಕ್ ಅವರು ಲೇವಡಿ ಮಾಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸುಭದ್ರ ಸರ್ಕಾರ ಮುಂದುವರೆ ಯಲಿ ಎಂಬುದು ಜನತೆಯ ಆಶಯವಾಗಿದೆ. ಹೀಗಾಗಿ ಜನರು ಈ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಕೈಹಿಡಿದಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
Advertisement