ಬೆಂಗಳೂರು: ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯವಾಟಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
33 ವರ್ಷದ ಮಾಂತೇಶ್ ಮತ್ತಿಕೊದ್ದ ಬಂಧಿತ ಆರೋಪಿ. ಈತನಿಂದ 89,700 ನಗದು, 4 ಮೊಬೈಲ್ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನಗರದ ಬನಶಂಕರಿ ಯಲ್ಲಿ ಅಸೈರ್ ಥಾಯಿ ಸ್ಪಾ ಸಲೂನ್ ನಲ್ಲಿ ನಾರಾಯಣ ಸ್ವಾಮಿ ಎಂಬಾತ ಅಕ್ರಮವಾಗಿ ಹುಡುಗಿಯರನ್ನು ಇಟ್ಟುಕೊಂಡು ವೇಶ್ಯವಾಟಿಕೆ ನಡೆಸುತ್ತಿದ್ದ. ಈತ ತಲೆ ಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
Advertisement