ಉಡುಪಿ : ಶಿಕ್ಷಕಿಗೆ ಕಿರುಕುಳ ನೀಡಿದ ಆಪಾದನೆ ಹಿನ್ನೆಲೆಯಲ್ಲಿ ಜಿಲ್ಲೆಯ ಉಪ್ಪುಂದ ಗ್ರಾಮದ ಸರ್ಕಾರಿ ಹಿರಿಯ ಉರ್ದು ಶಾಲೆಯ ಎಸ್ಡಿಎಂಸಿ ಅಧ್ಯಕ್ಷರನ್ನು ವಜಾಗೊಳಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶ ನೀಡಿದ್ದಾರೆ.
ಈ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಮಮತಾ ಎಂಬುವವರ ಮೇಲೆ ಅದೇ ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷ ಮೋಹನಚಂದ್ರ ಎಂಬಾತ ಹಲ್ಲೆಮಾಡಿ, ಜೀವ ಬೆದರಿಕೆ ಹಾಕಿದ್ದು, ಅವರನ್ನು ಎಸ್ ಡಿ ಎಂಸಿ ಹುದ್ದೆಯಿಂದ ವಜಾಗೊಳಿಸಿ ಕಠಿಣ ಕ್ರಮ ಜರುಗಿಸುವಂತೆ ಎಸ್.ಸುರೇಶ್ ಕುಮಾರ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಈ ಕುರಿತಂತೆ ಶಿಕ್ಷಕಿಯೊಂದಿಗೆ ಮಾತನಾಡಿ ಸಾಂತ್ವನ ಹೇಳಿದ ಬಳಿಕ ಸಚಿವ ಸುರೇಶ್ಕುಮಾರ್ ಶಿಕ್ಷಣ ಇಲಾಖೆಯ ಆಯುಕ್ತರಿಗೆ, ಸಂಬಂಧಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಕಠಿಣ ಕ್ರಮಕ್ಕೆ ಮುಂದಾಗಬೇಕೆಂದು ಸ್ಪಷ್ಟ ಸೂಚನೆ ನೀಡಿದ್ದಾರೆ.
ಈ ಬಗ್ಗೆ ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಸಚಿವರು ತಾವು ಸ್ಥಳೀಯ ಶಾಸಕರಿಗೂ ಈ ಬಗ್ಗೆ ತಿಳಿಸಿದ್ದು, ಇಂತಹ ಪ್ರಕರಣಗಳು ಮುಂದೆ ನಡೆಯದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
Advertisement