ಪ್ರತ್ಯೇಕ ಪ್ರಕರಣ: ನೋವಿನ ಬಾಧೆಗೆ ಯುವಕ, ಸಾಲದ ಸುಳಿಗೆ ರೈತ ಆತ್ಮಹತ್ಯೆ

ಪ್ರತ್ಯೇಕ ಪ್ರಕರಣದಲ್ಲಿ ರೈತ ಹಾಗೂ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಾಮರಾಜನಗರ: ಪ್ರತ್ಯೇಕ ಪ್ರಕರಣದಲ್ಲಿ ರೈತ ಹಾಗೂ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನಲ್ಲಿ ನಡೆದಿದೆ.

ಚಾಮರಾಜನಗರ ತಾಲೂಕಿನ ಬಿಸಲವಾಡಿ ಗ್ರಾಮದ ಸಿದ್ದರಾಜು(19) ಎಂಬಾತ ನೋವಿನ ಬಾಧೆ ತಾಳಲಾರದೇ ಆತ್ಮಹತ್ಯೆ ಗೆ ಶರಣಾಗಿದ್ದಾನೆ. 

ಆರು ತಿಂಗಳ ಹಿಂದೆಯಷ್ಟೇ ಎಡಗಾಲು ಮಂಡಿಯಲ್ಲಿದ್ದ ಗಂಟೊಂದನ್ನು ಆಪರೇಶನ್ ಮೂಲಕ ತೆಗೆಸಿದ್ದರೂ ನೋವು ನಿವಾರಣೆಯಾಗದಿರುವುದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಯುವಕ ನೇಣು ಹಾಕಿಕೊಂಡಿದ್ದಾನೆ. ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ  ಸಾಲದ ಬಾಧೆ ತಾಳಲಾರದೇ ಜಿಗುಪ್ಸೆಗೊಂಡ ಚಾಮರಾಜನಗರ ತಾಲ್ಲೂಕಿನ ಹರದನಹಳ್ಳಿ ಗ್ರಾಮದ ರಾಚನಾಯ್ಕ (59) ಎಂಬ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಎರಡು ಹೆಣ್ಣು ಎರಡು ಗಂಡು ಮಕ್ಕಳು ಸೇರಿದಂತೆ ನಾಲ್ವರು ಮಕ್ಕಳನ್ನ ಹೊಂದಿದ್ದ ಮೃತ ರಾಚನಾಯ್ಕ ಬೆಳೆ ಸಾಲ ಮಾಡಿ ಕೈಸುಟ್ಟುಕೊಂಡಿದ್ದರು ಎನ್ನಲಾಗಿದೆ. ಚಾಮರಾಜನಗರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ:- ಗೂಳಿಪುರ ನಂದೀಶ ಎಂ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com