ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ಕಾರು ಕದ್ದು ಪರಾರಿಯಾದ ಕಳ್ಳರು

ಕಾರೊಂದರಲ್ಲಿ ಬಂದು ಮತ್ತೊಂದು ಕಾರನ್ನು ಕಳವು ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಹಿಪ್ಪೆ ಆಂಜನೇಯ ಬಡಾವಣೆಯಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕಾರೊಂದರಲ್ಲಿ ಬಂದು ಮತ್ತೊಂದು ಕಾರನ್ನು ಕಳವು ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಹಿಪ್ಪೆ ಆಂಜನೇಯ ಬಡಾವಣೆಯಲ್ಲಿ ನಡೆದಿದೆ.

ಕಾರು ಕಳ್ಳತನ ಮಾಡಿರುವ ದೃಶ್ಯ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬುಧವಾರ ತಡರಾತ್ರಿ 2 ಗಂಟೆ ವೇಳೆಗೆ ಹಿಪ್ಪೆ ಆಂಜನೇಯ ಬಡಾವಣೆಯ 4ನೇ ಕ್ರಾಸ್‍ನ ನಿವಾಸಿ ದೀಪಕ್ ಎಂಬುವವರ ಮನೆ ಮುಂದೆ ನಿಲ್ಲಿಸಿದ್ದ 14 ಲಕ್ಷ ರೂ. ಮೌಲ್ಯದ ಕಾರನ್ನು ಕಳ್ಳರು ಕದಿಯುವ ಮೂಲಕ ತಮ್ಮ ಕೈಚಳಕ ತೋರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com