ಪೌರತ್ವ ಕಿಚ್ಚು: ಮಂಗಳೂರಿನಲ್ಲಿ ಪೊಲೀಸರ ಗುಂಡೇಟಿಗೆ ಇಬ್ಬರು ಬಲಿ!

ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದು ಹಿಂಸಾಚಾರದ ವೇಳೆ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಪ್ರತಿಭಟನಾಕಾರರು ಮೃತಪಟ್ಟಿದ್ದಾರೆ.
ಪ್ರತಿಭಟನೆ ಚಿತ್ರ
ಪ್ರತಿಭಟನೆ ಚಿತ್ರ

ಮಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದು ಹಿಂಸಾಚಾರದ ವೇಳೆ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಪ್ರತಿಭಟನಾಕಾರರು ಮೃತಪಟ್ಟಿದ್ದಾರೆ.

ಮೃತ ಪ್ರತಿಭಟನಾಕಾರರನ್ನು ಬೆಂಗ್ರೆ ನಿವಾಸಿ 23 ವರ್ಷದ ನೌಶೀನ್ ಮತ್ತು 49 ವರ್ಷದ ಜಲೀಲ್ ಎಂಬುವರು ಮೃತಪಟ್ಟಿದ್ದಾರೆ. 

ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಉಲ್ಲಂಘಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದರು ಅಲ್ಲದೆ ಗಾಳಿಯಲ್ಲಿ ಗುಂಡು ಸಹ ಹಾರಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com