ಸಾಲಮನ್ನಾದ ಎನ್ಒಸಿ ನೀಡಲು ಲಂಚಕ್ಕೆ ಬೇಡಿಕೆ: ಎಸಿಬಿ ಬಲೆಗೆ ಬ್ಯಾಂಕ್ ಮ್ಯಾನೇಜರ್

ಸಾಲಮನ್ನಾದ ಎನ್ಒಸಿ ನೀಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾದ ಬ್ಯಾಂಕ್ ಮ್ಯಾನೇಜರ್ ಎಸಿಬಿ ಬಲೆಗೆ ಬಿದ್ದಿರುವ ಘಟನೆ ತಾಲೂಕಿನ ಆಲೂರಿನಲ್ಲಿ ನಡೆದಿದೆ.
ವಿಜಯಾ ಬ್ಯಾಂಕ್
ವಿಜಯಾ ಬ್ಯಾಂಕ್

ಚಾಮರಾಜನಗರ: ಸಾಲಮನ್ನಾದ ಎನ್ಒಸಿ ನೀಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾದ ಬ್ಯಾಂಕ್ ಮ್ಯಾನೇಜರ್ ಎಸಿಬಿ ಬಲೆಗೆ ಬಿದ್ದಿರುವ ಘಟನೆ ತಾಲೂಕಿನ ಆಲೂರಿನಲ್ಲಿ ನಡೆದಿದೆ. 

ವಿಜಯಾ ಬ್ಯಾಂಕ್ ಮ್ಯಾನೇಜರ್ ಪ್ರವೀಣ್ ಎಸಿಬಿ ಬಲೆಗೆ ಬಿದ್ದವರು. ಸಿದ್ದಪ್ಪಾಜಿ ಎಂಬ ರೈತರಿಗೆ ಸಾಲಮನ್ನಾದ ತಿರುವಳಿ ಪತ್ರ ನೀಡಲು 15 ಸಾವಿರ ರೂ. ಲಂಚಕ್ಕೆ ಮ್ಯಾನೇಜರ್ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. 

ವಿಜಯಾ ಬ್ಯಾಂಕ್ಮೊದಲು 2 ಸಾವಿರ ನೀಡಿ ಉಳಿದ 13 ಸಾವಿರ ರೂ. ನೀಡುವ ಮುನ್ನ ರೈತ ಎಸಿಬಿಗೆ ದೂರು ನೀಡಿದ್ದರು. ಎಸಿಬಿ ಅಧಿಕಾರಿಗಳು ತಮ್ಮ ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com