ಉಡುಪಿ ಪೇಜಾವರ ಶ್ರೀಗಳು ಆಸ್ಪತ್ರೆಗೆ ದಾಖಲು;ಆರೋಗ್ಯ ವಿಚಾರಿಸಿದ ಪ್ರಧಾನಿ, ನಾಳೆ ಅಮಿತ್ ಶಾ, ಮುಖ್ಯಮಂತ್ರಿ ಭೇಟಿ 

ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದ್ದು, ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಅವರ ಆರೋಗ್ಯ ವಿಚಾರಿಸಿದ್ದಾರೆ ಎಂದು ತಿಳಿದುಬಂದಿದೆ.
ಪೇಜಾವರ ಶ್ರೀ-ಪ್ರಧಾನಿ ನರೇಂದ್ರ ಮೋದಿ
ಪೇಜಾವರ ಶ್ರೀ-ಪ್ರಧಾನಿ ನರೇಂದ್ರ ಮೋದಿ

ಉಡುಪಿ: ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದ್ದು, ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಅವರ ಆರೋಗ್ಯ ವಿಚಾರಿಸಿದ್ದಾರೆ ಎಂದು ತಿಳಿದುಬಂದಿದೆ.
ಶ್ರೀಗಳ ಆಪ್ತ ಕಾರ್ಯದರ್ಶಿ ಟಿ ಪಿ ಅನಂತ್ ಗೆ ಕರೆ ಮಾಡಿ ಶ್ರೀಗಳ ಆರೋಗ್ಯ ವಿಚಾರಿಸಿದ ಪ್ರಧಾನಿಗಳು ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ ಎಂದು ಗೊತ್ತಾಗಿದೆ.


ಇನ್ನು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಿರುವ ಶ್ರೀಗಳಿಗೆ ಉಸಿರಾಟ ಮತ್ತು ನ್ಯುಮನಿಯಾ ತೊಂದರೆಯಿದ್ದು ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಸದ್ಯ ನ್ಯುಮೋನಿಯಾಕ್ಕೆ ಆಂಟಿಬಯಾಟಿಕ್ ಮತ್ತು ಇತರ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಣಿಪಾಲ ಆಸ್ಪತ್ರೆ ಮೂಲಗಳು ತಿಳಿಸಿವೆ.


ನಾಳೆ ಅಮಿತ್ ಶಾ ಅವರು ಉಡುಪಿಗೆ ಆಗಮಿಸುವ ಸಾಧ್ಯತೆಯಿದ್ದು ಮುಖ್ಯಮಂತ್ರಿ ಸಹ ಮಂಗಳೂರಿನಿಂದ ಉಡುಪಿಗೆ ಹೋಗಿ ಶ್ರೀಗಳನ್ನು ಭೇಟಿ ಮಾಡುವ ಸಾಧ್ಯತೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com