ಸಿಐಡಿ ತನಿಖೆಗೆ ಸಹಮತವಿಲ್ಲ, ನ್ಯಾಯಾಂಗ ತನಿಖೆಯಾಗಬೇಕು: ಸಿದ್ದರಾಮಯ್ಯ

ಮಂಗಳೂರು ಗೋಲಿಬಾರ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿರುವುದಕ್ಕೆ ನನಗೆ ಒಪ್ಪಿಗೆಯಿಲ್ಲ, ಮಂಗಳೂರು ಘಟನೆ ಕುರಿತು ನ್ಯಾಯಾಂಗ ತನಿಖೆಯೇ ಆಗಬೇಕು ಎಂದು ಮಾಜಿ ಸಿಎಂ ಸಿದ್ದರಾಮ್ಯ ಆಗ್ರಹಿಸಿದ್ದಾರೆ. 
ಸಿದ್ದರಾಮಯ್ಯ
ಸಿದ್ದರಾಮಯ್ಯ

ಮಂಗಳೂರು:  ಮಂಗಳೂರು ಗೋಲಿಬಾರ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿರುವುದಕ್ಕೆ ನನಗೆ ಒಪ್ಪಿಗೆಯಿಲ್ಲ, ಮಂಗಳೂರು ಘಟನೆ ಕುರಿತು ನ್ಯಾಯಾಂಗ ತನಿಖೆಯೇ ಆಗಬೇಕು ಎಂದು ಮಾಜಿ ಸಿಎಂ ಸಿದ್ದರಾಮ್ಯ ಆಗ್ರಹಿಸಿದ್ದಾರೆ. 

ಕರ್ಫ್ಯೂ ತೆರವಾದ ಬಳಿಕ ಇಂದು ಮಂಗಳೂರಿಗೆ ಭೇಟಿ ನೀಡಿದ ಅವರು, ಗೋಲಿಬಾರ್​ನಲ್ಲಿ ಸಾವನ್ನಪ್ಪಿದವರ ಕುಟುಂಬಸ್ಥರನ್ನು ಭೇಟಿಯಾಗಿ ಮಾತನಾಡುತ್ತೇನೆ ಎಂದರು.

ಇದೇ ವೇಳೆ ಘಟನೆಯನ್ನು ಸಿಐಡಿಗೆ ಒಪ್ಪಿಸುವ ನಿರ್ಧಾರ ಸರಿಯಲ್ಲ. ಕಾರಣ ಸಿಐಡಿ ಇರುವುದು ರಾಜ್ಯ ಪೊಲೀಸರ ಕೈಯಲ್ಲಿ. ಗೋಲಿಬಾರ್​ ನಡೆದಿದ್ದು ಕೂಡ ಪೊಲೀಸರಿಂದ. ಹೀಗಾಗಿ ಈ ತನಿಖೆಗೆ ನಮ್ಮ ವಿರೋಧವಿದೆ  ಎಂದರು.

ಘಟನೆಯನ್ನು ಹೈ ಕೋರ್ಟ್​ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಬೇಕು. ನ್ಯಾಯಾಂಗ ತನಿಖೆಯಿಂದ ಮಾತ್ರ ನ್ಯಾಯ ದೊರಕಲು ಸಾಧ್ಯ. ಸಿಎಂ ಸದಾ ಸುಳ್ಳು ಹೇಳುವವರು. ಅವರು ಘಟನೆಯ ಪ್ರತ್ಯಕ್ಷ ದರ್ಶಿಯಲ್ಲ. ಹಾಗಾಗಿ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com