ಕೊಳ್ಳೇಗಾಲ: ಟಾಟಾ ಏಸ್ ಪಲ್ಟಿ; 12 ಮಂದಿಗೆ ಗಾಯ, 6 ಜನರ ಸ್ಥಿತಿ ಗಂಭೀರ

ಕಬ್ಬು ಕಟಾವು ಮಾಡಲು ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ಟಾಟಾ ಏಸ್ ಪಲ್ಟಿಯಾಗಿ 12 ಮಂದಿ ಗಾಯಗೊಂಡಿದ್ದರೆ ಅವರಲ್ಲಿ 6 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಾಮರಾಜನಗರ: ಕಬ್ಬು ಕಟಾವು ಮಾಡಲು ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ಟಾಟಾ ಏಸ್ ಪಲ್ಟಿಯಾಗಿ 12 ಮಂದಿ ಗಾಯಗೊಂಡಿದ್ದರೆ ಅವರಲ್ಲಿ 6 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಕೊಳ್ಳೇಗಾಲ ತಾಲೂಕಿನ ಮತ್ತಿಪುರ ಕ್ರಾಸ್​​​ನಲ್ಲಿ ಈ ಘಟನೆ ನಡೆದಿದೆ. ನರೀಪುರದಿಂದ 14 ಮಂದಿ ಕೂಲಿ ಕಾರ್ಮಿಕರನ್ನು ಕಬ್ಬು ಕಟಾವಿಗೆ ಕೂಲಿ ಕಾರ್ಮಿಕರನ್ನು ಟಾಟಾ ಏಸ್​​ ವಾಹನದಲ್ಲಿ ಕರೆತರುತ್ತಿದ್ದಾಗ ಈ ಅವಘಡ ಸಂಭವಿಸಿದೆ. 

ಕೊಳ್ಳೇಗಾಲ ಬಳಿ ರಸ್ತೆ ಅಪಘಾತ, 6 ಮಂದಿ ಸ್ಥಿತಿ ಗಂಭೀರಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್​ ಪಲ್ಟಿಯಾಗಿದೆ. 12 ಮಂದಿಗೆ ಗಾಯಗೊಂಡಿದ್ದು, ಅದರಲ್ಲಿ 6 ಕಾರ್ಮಿಕರು ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ. 

ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಸಾಗಿಸಲಾಗಿದೆ.ಉಳಿದ ಗಾಯಾಳುಗಳನ್ನು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಶಾಸಕ ಆರ್. ನರೇಂದ್ರ ಭೇಟಿ ನೀಡಿದ್ದಾರೆ. 

ಚಾಲಕನ ಅಜಾಗರೂಕತೆಯಿಂದಾಗಿ ಈ ಅವಘಡ ಸಂಭವಿಸಿದೆ ಎನ್ನಲಾಗ್ತಿದೆ. ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ:- ಗೂಳಿಪುರ ನಂದೀಶ ಎಂ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com